MPP notes
ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.
ಕ್ರಿ.ಪೂ.1500 ಭಾರತದ ಮೇಲೆ ಆಯ್ರರ ದಾಳಿ.
ಕ್ರಿ.ಪೂ.1000 ಕಬ್ಬಿಣದ ಬಳಕೆ.
ಕ್ರಿ.ಪೂ.1000-500 ವೇದಗಳ ಕಾಲ
ಕ್ರಿ.ಪೂ.563-483 ಗೌತಮ ಬುದ್ಧನ ಕಾಲ
ಕ್ರಿ.ಪೂ.540-468 ಮಹಾವೀರನ ಕಾಲ
ಕ್ರಿ.ಪೂ.542-490 ಹರ್ಯಂಕ ಸಂತತಿ
ಕ್ರಿ.ಪೂ.413-362 ಶಿಶುನಾಗ ಸಂತತಿ.
ಕ್ರಿ.ಪೂ.362-324 ನಂದ ಸಂತತಿ.
ಕ್ರಿ.ಪೂ.327-325 ಭಾರತದ ಮೇಲೆ ಅಲೆಗ್ಜಾಂಡರನ ಧಾಳಿ
ಕ್ರಿ.ಪೂ.324-183 ಮೌರ್ಯ ಸಂತತಿ.
ಕ್ರಿ.ಪೂ.324-298 ಚಂದ್ರಗುಪ್ತ ಮೌರ್ಯನ ಕಾಲ
ಕ್ರಿ.ಪೂ.298-273 ಬಿಂದುಸಾರನ ಕಾಲ.
ಕ್ರಿ.ಪೂ.273-232 ಅಶೋಕ ಸಾಮ್ರಾಟನ ಕಾಲ.
ಕ್ರಿ.ಪೂ.185-147 ಶುಂಗ ಸಂತತಿ.
ಕ್ರಿ.ಪೂ.73-28 ಕಣ್ವರ ಆಳ್ವಿಕೆ.
ಕ್ರಿ.ಪೂ.235-ಕ್ರಿ.ಶ.225 ಶಾತವಾಹನರವ ಆಳ್ವಿಕೆಯ ಕಾಲ.
ಕ್ರಿ.ಪೂ.155. ಗ್ರೀಕ್ ಮಿನಾಂಡರ್ ನ ಭಾರತದ ಮೇಲಿನ ಧಾಳಿ.
ಕ್ರಿ.ಪೂ.58-57 ವಿಕ್ರಮ ಸಂವತ್ಸರ( ವಿಕ್ರಮಾದಿತ್ಯ ನಿಂದ)
ಕ್ರಿ.ಶ.78-101 ಕಾನಿಷ್ಕನ ಕಾಲ.
ಕ್ರಿ.ಶ.78 ಶಕ ಸಂವತ್ಸರ
ಕ್ರಿ.ಶ.320-540 ಗುಪ್ತ ಸಾಮ್ರಜ್ಯ.
ಕ್ರಿ.ಶ.335-375 ಸಮುದ್ರಗುಪ್ತನ ಆಳ್ವಿಕೆ.
ಕ್ರಿ.ಶ.405-411 ಭಾರತದಲ್ಲಿ ಫಾಹಿಯಾನ.
ಕ್ರಿ.ಶ.535-757 ಬದಾಮಿಯ ಚಾಲುಕ್ಯರು.
ಕ್ರಿ.ಶ.300-888 ಕಂಚಿಯ ಪಲ್ಲವರು.
ಕ್ರಿ.ಶ.606-647 ಕನೌಜಿನ ಹರ್ಷವರ್ಧನನ ಆಳ್ವಿಕೆ.
ಕ್ರಿ.ಶ.630-644 ಭಾರತದಲ್ಲಿ ಹೂಯೆನ್ ತ್ಸಾಂಗ್.
ಕ್ರಿ.ಶ.757-968 ರಾಷ್ಟ್ರಕೂಟರ ಆಳ್ವಿಕೆ.
ಕ್ರಿ.ಶ.814-878 ಅಮೋಘವರ್ಷ ನೃಪತುಂಗ. ಕ್ರಿ.ಶ.712 ಅರಬರು ಸಿಂದ್ ಪ್ರದೇಶವನ್ನು ಆಕ್ರಮಿಸಿದ್ದು.
ಕ್ರಿ.ಶ.760-1142 ಬಂಗಾಳದ ಪಾಲರು.
ಕ್ರಿ.ಶ.800-1036 ಕನೌಜಿನ ಪ್ರತಿಹಾರರು
ಕ್ರಿ.ಶ.916-1203 ಬುಂದೇಲಖಂಡದ ಚಂದೇಲರು.
ಕ್ರಿ.ಶ.907-1256 ಚೋಳ ಸಾಮ್ರಾಜ್ಯ.
ಕ್ರಿ.ಶ.974-1238 ಗುಜರಾತಿನ ಸೋಲಂಕಿಗಳು.
ಕ್ರಿ.ಶ.974-1233 ಮಾಳ್ವದ ಪಾರಮಾರರು.
ಕ್ರಿ.ಶ. 1118-1190 ಬಂಗಾಳದ ಸೇನರು.
ಕ್ರಿ.ಶ.1000-1027 ಭಾರತದ ಮೇಲೆ ಮೊಹಮದ್ ಘಜ್ನಿಯ ಧಾಳಿಗಳು.
ಕ್ರಿ.ಶ.1206-1526 ದೆಹಲಿ ಸುಲ್ತಾನರ ಕಾಲ.
ಕ್ರಿ.ಶ.1206-1290 ಗುಲಾಮಿ ಸಂತತಿಯ ಕಾಲ.
ಕ್ರಿ.ಶ.1290-1320 ಖಿಲ್ಜಿ ಸಂತತಿ.
ಕ್ರಿ.ಶ.1320-1414 ತುಘಲಕ್ ಸಂತತಿ.
ಕ್ರಿ.ಶ.1414-1451 ಸೈಯದ್ ಸಂತತಿ.
ಕ್ರಿ.ಶ. 1451-1525 ಲೂಧಿ ಸಂತತಿ.
ಕ್ರಿ.ಶ.1336-1649 ವಿಜಯನಗರದ ಆಳ್ವಕೆ.
ಕ್ರಿ.ಶ.1346-1518 ಬಹುಮನಿ ಸುಲ್ತಾನರ ಕಾಲ.
ಕ್ರಿ.ಶ.1510-1530 ಶ್ರೀಕೃಷ್ಣದೇವರಾಯನ ಕಾಲ. ಕ್ರಿ.ಶ.1498 ಭಾರತಕ್ಕೆ ಪೋರ್ಚುಗೀಸರ ವಾಸ್ಕೋಡಿಗಾಮನ ಆಗಮನ.
ಕ್ರಿ.ಶ.1526-1857 ಮೊಘಲರ ಆಳ್ವಿಕೆಯ ಕಾಲ.
ಕ್ರಿ.ಶ.1627-1680 ಶಿವಾಜಿಯ ಕಾಲ.
ಕ್ರಿ.ಶ.1757 ಪ್ಲಾಸಿ ಕದನ.
ಕ್ರಿ.ಶ.1764 ಬಕ್ಸಾರ ಕದನ.
ಕ್ರಿ.ಶ.1767-1769 ಮೊದಲ ಆಂಗ್ಲೋ-ಮೈಸೂರ ಯುದ್ದ.
ಕ್ರಿ.ಶ.1773 ರೆಗ್ಯುಲೇಟಿಂಗ್ ಕಾಯ್ದೆ.
ಕ್ರಿ.ಶ.1784 ಪಿಟ್ಸ್ ಇಂಡಿಯಾ ಕಾಯ್ದೆ.
ಕ್ರಿ.ಶ.1857 ಸಿಪಾಯಿ ದಂಗೆ.
ಕ್ರಿ.ಶ.1861 ಭಾರತೀಯ ಕೌನ್ಸಿಲ್ ಕಾಯ್ದೆ.
ಕ್ರಿ.ಶ.1885 ಭಾರತದ ರಾಷ್ಟ್ರೀಯ ಕಾಂಗ್ರೇಸ್ಸಿನ ಉದಯ.
1905- ಬಂಗಾಳ ವಿಭಜನೆ.
1906-ಮುಸ್ಲಿಂ ಲೀಗ್ ಸ್ಥಾಪನೆ.
1907- ಸೂರತ್ ಅಧಿವೇಶನ/ಸೂರತ್ ಒಡಕು
1909- ಮಿಂಟೋ ಮಾಲ್ರೇ ಸುಧಾರಣೆ.
1911- ಕಲ್ಕತ್ತಾ ಅಧಿವೇಶನ.
1913 -ಗದ್ದಾರ್ ಪಕ್ಷ ಸ್ಥಾಪನೆ.
1915-[ಜನೆವರಿ-9].ಗಾಂಧೀಜಿ ಭಾರತಕ್ಕೆ ಆಗಮನ.
1916 -ಲಕ್ನೋ ಅಧಿವೇಶನ.
1917 -ಚಂಪಾರಣ್ಯ ಸತ್ಯಾಗ್ರಹ
1918 -ಹತ್ತಿ ಗಿರಣಿ ಸತ್ಯಾಗ್ರಹ'
1919 -ರೌಲತ್ ಕಾಯಿದೆ.
1919-[ಏಪ್ರಿಲ್13] ಜಲಿಯನ್ ವಾಲಾಬಾಗ್ ದುರಂತ.
1920 -ಖಿಲಾಪತ್ ಚಳುವಳಿ.
1922 -ಚೌರಾಚೌರಿ ಘಟನೆ.
1923 -ಸ್ವರಾಜ್ ಪಕ್ಷ ಸ್ಥಾಪನೆ.
1927-ಸೈಮನ್
ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.
ಕ್ರಿ.ಪೂ.1500 ಭಾರತದ ಮೇಲೆ ಆಯ್ರರ ದಾಳಿ.
ಕ್ರಿ.ಪೂ.1000 ಕಬ್ಬಿಣದ ಬಳಕೆ.
ಕ್ರಿ.ಪೂ.1000-500 ವೇದಗಳ ಕಾಲ
ಕ್ರಿ.ಪೂ.563-483 ಗೌತಮ ಬುದ್ಧನ ಕಾಲ
ಕ್ರಿ.ಪೂ.540-468 ಮಹಾವೀರನ ಕಾಲ
ಕ್ರಿ.ಪೂ.542-490 ಹರ್ಯಂಕ ಸಂತತಿ
ಕ್ರಿ.ಪೂ.413-362 ಶಿಶುನಾಗ ಸಂತತಿ.
ಕ್ರಿ.ಪೂ.362-324 ನಂದ ಸಂತತಿ.
ಕ್ರಿ.ಪೂ.327-325 ಭಾರತದ ಮೇಲೆ ಅಲೆಗ್ಜಾಂಡರನ ಧಾಳಿ
ಕ್ರಿ.ಪೂ.324-183 ಮೌರ್ಯ ಸಂತತಿ.
ಕ್ರಿ.ಪೂ.324-298 ಚಂದ್ರಗುಪ್ತ ಮೌರ್ಯನ ಕಾಲ
ಕ್ರಿ.ಪೂ.298-273 ಬಿಂದುಸಾರನ ಕಾಲ.
ಕ್ರಿ.ಪೂ.273-232 ಅಶೋಕ ಸಾಮ್ರಾಟನ ಕಾಲ.
ಕ್ರಿ.ಪೂ.185-147 ಶುಂಗ ಸಂತತಿ.
ಕ್ರಿ.ಪೂ.73-28 ಕಣ್ವರ ಆಳ್ವಿಕೆ.
ಕ್ರಿ.ಪೂ.235-ಕ್ರಿ.ಶ.225 ಶಾತವಾಹನರವ ಆಳ್ವಿಕೆಯ ಕಾಲ.
ಕ್ರಿ.ಪೂ.155. ಗ್ರೀಕ್ ಮಿನಾಂಡರ್ ನ ಭಾರತದ ಮೇಲಿನ ಧಾಳಿ.
ಕ್ರಿ.ಪೂ.58-57 ವಿಕ್ರಮ ಸಂವತ್ಸರ( ವಿಕ್ರಮಾದಿತ್ಯ ನಿಂದ)
ಕ್ರಿ.ಶ.78-101 ಕಾನಿಷ್ಕನ ಕಾಲ.
ಕ್ರಿ.ಶ.78 ಶಕ ಸಂವತ್ಸರ
ಕ್ರಿ.ಶ.320-540 ಗುಪ್ತ ಸಾಮ್ರಜ್ಯ.
ಕ್ರಿ.ಶ.335-375 ಸಮುದ್ರಗುಪ್ತನ ಆಳ್ವಿಕೆ.
ಕ್ರಿ.ಶ.405-411 ಭಾರತದಲ್ಲಿ ಫಾಹಿಯಾನ.
ಕ್ರಿ.ಶ.535-757 ಬದಾಮಿಯ ಚಾಲುಕ್ಯರು.
ಕ್ರಿ.ಶ.300-888 ಕಂಚಿಯ ಪಲ್ಲವರು.
ಕ್ರಿ.ಶ.606-647 ಕನೌಜಿನ ಹರ್ಷವರ್ಧನನ ಆಳ್ವಿಕೆ.
ಕ್ರಿ.ಶ.630-644 ಭಾರತದಲ್ಲಿ ಹೂಯೆನ್ ತ್ಸಾಂಗ್.
ಕ್ರಿ.ಶ.757-968 ರಾಷ್ಟ್ರಕೂಟರ ಆಳ್ವಿಕೆ.
ಕ್ರಿ.ಶ.814-878 ಅಮೋಘವರ್ಷ ನೃಪತುಂಗ. ಕ್ರಿ.ಶ.712 ಅರಬರು ಸಿಂದ್ ಪ್ರದೇಶವನ್ನು ಆಕ್ರಮಿಸಿದ್ದು.
ಕ್ರಿ.ಶ.760-1142 ಬಂಗಾಳದ ಪಾಲರು.
ಕ್ರಿ.ಶ.800-1036 ಕನೌಜಿನ ಪ್ರತಿಹಾರರು
ಕ್ರಿ.ಶ.916-1203 ಬುಂದೇಲಖಂಡದ ಚಂದೇಲರು.
ಕ್ರಿ.ಶ.907-1256 ಚೋಳ ಸಾಮ್ರಾಜ್ಯ.
ಕ್ರಿ.ಶ.974-1238 ಗುಜರಾತಿನ ಸೋಲಂಕಿಗಳು.
ಕ್ರಿ.ಶ.974-1233 ಮಾಳ್ವದ ಪಾರಮಾರರು.
ಕ್ರಿ.ಶ. 1118-1190 ಬಂಗಾಳದ ಸೇನರು.
ಕ್ರಿ.ಶ.1000-1027 ಭಾರತದ ಮೇಲೆ ಮೊಹಮದ್ ಘಜ್ನಿಯ ಧಾಳಿಗಳು.
ಕ್ರಿ.ಶ.1206-1526 ದೆಹಲಿ ಸುಲ್ತಾನರ ಕಾಲ.
ಕ್ರಿ.ಶ.1206-1290 ಗುಲಾಮಿ ಸಂತತಿಯ ಕಾಲ ಕ್ರಿ.ಶ.1290-1320 ಖಿಲ್ಜಿ ಸಂತತಿ.
ಕ್ರಿ.ಶ.1320-1414 ತುಘಲಕ್ ಸಂತತಿ.
ಕ್ರಿ.ಶ.1414-1451 ಸೈಯದ್ ಸಂತತಿ.
ಕ್ರಿ.ಶ. 1451-1525 ಲೂಧಿ ಸಂತತಿ.
ಕ್ರಿ.ಶ.1336-1649 ವಿಜಯನಗರದ ಆಳ್ವಕೆ.
ಕ್ರಿ.ಶ.1346-1518 ಬಹುಮನಿ ಸುಲ್ತಾನರ ಕಾಲ.
ಕ್ರಿ.ಶ.1510-1530 ಶ್ರೀಕೃಷ್ಣದೇವರಾಯನ ಕಾಲ. ಕ್ರಿ.ಶ.1498 ಭಾರತಕ್ಕೆ ಪೋರ್ಚುಗೀಸರ ವಾಸ್ಕೋಡಿಗಾಮನ ಆಗಮನ.
ಕ್ರಿ.ಶ.1526-1857 ಮೊಘಲರ ಆಳ್ವಿಕೆಯ ಕಾಲ.
ಕ್ರಿ.ಶ.1627-1680 ಶಿವಾಜಿಯ ಕಾಲ.
ಕ್ರಿ.ಶ.1757 ಪ್ಲಾಸಿ ಕದನ.
ಕ್ರಿ.ಶ.1764 ಬಕ್ಸಾರ ಕದನ.
ಕ್ರಿ.ಶ.1767-1769 ಮೊದಲ ಆಂಗ್ಲೋ-ಮೈಸೂರ ಯುದ್ದ.
ಕ್ರಿ.ಶ.1773 ರೆಗ್ಯುಲೇಟಿಂಗ್ ಕಾಯ್ದೆ.
ಕ್ರಿ.ಶ.1784 ಪಿಟ್ಸ್ ಇಂಡಿಯಾ ಕಾಯ್ದೆ.
ಕ್ರಿ.ಶ.1857 ಸಿಪಾಯಿ ದಂಗೆ.
ಕ್ರಿ.ಶ.1861 ಭಾರತೀಯ ಕೌನ್ಸಿಲ್ ಕಾಯ್ದೆ.
ಕ್ರಿ.ಶ.1885 ಭಾರತದ ರಾಷ್ಟ್ರೀಯ ಕಾಂಗ್ರೇಸ್ಸಿನ ಉದಯ.
[11/08 16:25] Adavesh.p.Ediga: 1905- ಬಂಗಾಳ ವಿಭಜನೆ.
1906-ಮುಸ್ಲಿಂ ಲೀಗ್ ಸ್ಥಾಪನೆ.
1907- ಸೂರತ್ ಅಧಿವೇಶನ/ಸೂರತ್ ಒಡಕು
1909- ಮಿಂಟೋ ಮಾಲ್ರೇ ಸುಧಾರಣೆ.
1911- ಕಲ್ಕತ್ತಾ ಅಧಿವೇಶನ.
1913 -ಗದ್ದಾರ್ ಪಕ್ಷ ಸ್ಥಾಪನೆ.
1915-[ಜನೆವರಿ-9].ಗಾಂಧೀಜಿ ಭಾರತಕ್ಕೆ ಆಗಮನ.
1916 -ಲಕ್ನೋ ಅಧಿವೇಶನ.
1917 -ಚಂಪಾರಣ್ಯ ಸತ್ಯಾಗ್ರಹ
1918 -ಹತ್ತಿ ಗಿರಣಿ ಸತ್ಯಾಗ್ರಹ'
1919 -ರೌಲತ್ ಕಾಯಿದೆ.
1919-[ಏಪ್ರಿಲ್13] ಜಲಿಯನ್ ವಾಲಾಬಾಗ್ ದುರಂತ.
1920 -ಖಿಲಾಪತ್ ಚಳುವಳಿ.
1922 -ಚೌರಾಚೌರಿ ಘಟನೆ.
1923 -ಸ್ವರಾಜ್ ಪಕ್ಷ ಸ್ಥಾಪನೆ.
1927-ಸೈಮನ್ ಆಯೋಗ.
1928- ನೆಹರು ವರದಿ.
1929- ಬಾಡ್ರೋಲೀ ಸತ್ಯಾಗ್ರಹ.
1930 -ಕಾನೂನ ಭಂಗ ಚಳುವಳಿ.
1930 -1931-1932- ಮೂರು ದುಂಡು ಮೇಜಿನ ಸಮ್ಮೇಳನಗಳು.
1937 -ಪ್ರಾಂತೀಯ ಚುಣಾವಣೆ
1939 -ತ್ರೀಪುರಾ ಬಿಕ್ಕಟ್ಟು.
1940 -ಅಗಷ್ಟ ಕೊಡುಗೆ.
1942 -ಕ್ರಿಪ್ಸ ಆಯೋಗ
1945 -ಸಿಮ್ಲಾ ಸಮ್ಮೇಳನ
1946- ಕ್ಯಾಬಿನೆಟ್ ಆಯೋಗ
1947- ಭಾರತೀಯ ಸ್ವಾತಂತ್ರ್ಯ ಕಾಯಿದೆ. .
1928- ನೆಹರು ವರದಿ.
1929- ಬಾಡ್ರೋಲೀ ಸತ್ಯಾಗ್ರಹ.
1930 -ಕಾನೂನ ಭಂಗ ಚಳುವಳಿ.
1930 -1931-1932- ಮೂರು ದುಂಡು ಮೇಜಿನ ಸಮ್ಮೇಳನಗಳು.
1937 -ಪ್ರಾಂತೀಯ ಚುಣಾವಣೆ
1939 -ತ್ರೀಪುರಾ ಬಿಕ್ಕಟ್ಟು.
1940 -ಅಗಷ್ಟ ಕೊಡುಗೆ.
1942 -ಕ್ರಿಪ್ಸ ಆಯೋಗ
1945 -ಸಿಮ್ಲಾ ಸಮ್ಮೇಳನ
1946- ಕ್ಯಾಬಿನೆಟ್ ಆಯೋಗ
1947- ಭಾರತೀಯ ಸ್ವಾತಂತ್ರ್ಯ ಕಾಯಿದೆ.
ದಯವಿಟ್ಟು ...ಇದನ್ನು ಬರೆದಿಟ್ಟುಕಳ್ಳಿ.ಇತಿಹಾಸದ ಪ್ರಮುಖ ಘಟನೆಗಳು ......
Sunday, November 15, 2015
important notes
Saturday, October 10, 2015
Std
ಗೋತ್ರಗಳ ಹಿಂದಿರುವ ವೈಜ್ಞಾನಿಕ ಮಹತ್ವ:
ನಮ್ಮಲ್ಲಿ ಎಷ್ಟೋ ಜನರಲ್ಲಿ ಇರುವ ಗೊಂದಲ ಅಂದರೆ:
* ಗೋತ್ರ ಎಂದರೇನು?
* ಗೋತ್ರ ಪದ್ಧತಿ ನಮ್ಮಲ್ಲಿ ಯಾಕೆ ಇದೆ?
* ಯಾಕೆ ನಾವು ವಿವಾಹ ಮಾಡುವ ಮೊದಲು ಕಡ್ಡಾಯವಾಗಿ ಗೋತ್ರ ನೋಡುತ್ತೇವೆ?
* ಏಕೆ ಮಗ ಮಾತ್ರ ತಂದೆಯ ಗೋತ್ರವನ್ನು ಮುಂದುವರೆಸುತ್ತಾನೆ ಮಗಳಲ್ಲ?
* ಹೇಗೆ ಮಗಳ ಗೋತ್ರವು ಮದುವೆಯ ಬಳಿಕ ಬದಲಾಗುತ್ತದೆ?
ಪ್ರಥಮತವಾಗಿ "ಗೋತ್ರ" ಎಂಬ ಶಬ್ಧವು ಸಂಸ್ಕೃತದ ಎರಡು ಅಕ್ಷರಗಳಿಂದ ಉಂಟಾಗಿದ್ದು 'ಗೋ' ಅಂದರೆ ಹಸು, 'ತ್ರಾಹಿ' ಅಂದರೆ ಕೊಟ್ಟಿಗೆ ಎಂದರ್ಥ. ಗೋತ್ರವು 'ಹಸುವಿನ ಕೊಟ್ಟಿಗೆ' ಎಂದಾಗಿದ್ದು, ಪುರುಷ ತಳಿಯ ವಾಹಕವಾಗಿದೆ. ಹಾಗಾದರೆ ನಾವೆಲ್ಲರೂ ನಮ್ಮ ಮೂಲ ಪುರುಷ ಯಾವುದೋ ಋಷಿ ಅಥವಾ ಅಷ್ಟ ಋಷಿಗಳಲೊಬ್ಬರ ಅನುಯಾಯಿ ಆಗಿದ್ದು, ನಮ್ಮ ಗೋತ್ರವು ಆ ಮೂಲ ಪುರುಷ ಋಷಿಯ ಹೆಸರಿನಿಂದ ಗುರುತಿಸಿ ಕೊಳ್ಳುವೆವು. {ಸಪ್ತ ಋಷಿಗಳು: ವಸಿಷ್ಠ, ವಿಶ್ವಾಮಿತ್ರ, ಅತ್ರಿ, ಆಂಗೀರಸ, ಜಮದಗ್ನಿ, ಕಶ್ಯಪ, ಗೌತಮ, +ಭಾರಧ್ವಾಜ}
ಸಪ್ತಧಾತು ಸಮಪಿಂಡಂl ಸಮಯೋನಿ ಸಮುದ್ಭವಂl ಆತ್ಮಜೀವ ಸಮಾಯುಕ್ತಂl ಸೃಷ್ಟಿಕಾರ್ಯ ನಿರಂತರಂll
ತಂದೆ ಹಾಗೂ ತಾಯಿಯಿಂದ ಉತ್ಪತ್ತಿಯಾದ ಸಪ್ತಧಾತುಗಳು ಸೇರಿ, ತಾಯಿ ಗರ್ಭದಲ್ಲಿ ಸಮಪಿಂಡವಾಗಿ ಇಬ್ಬರ ಅಂಶದಿಂದ ಬಂದ ಪ್ರಾಣ, ಪ್ರಜ್ಞೆ, ಆತ್ಮಾಂಶಗಳು ಸಂಯುಕ್ತವಾಗಿ
ತಂದೆಯ ಇಪ್ಪತ್ತ ಮೂರು, ತಾಯಿಯ ಇಪ್ಪತ್ತ ಮೂರು ವರ್ಣತಂತುಗಳ ಕೂಡುವಿಕೆಯಿಂದ ಒಂದೇ ಒಂದು ಮೂಲ ಜೀವಕೋಶ ರಚನೆಯಾಗಿ ಅದೇ ಕೋಶ ವಿಭಜನೆಗೊಂಡು ಪ್ರತಿ ಶಿಶುವು ಜನ್ಮ ತಾಳುವುದು. ತಂದೆಯ ಇಪ್ಪತ್ತ ಮೂರು 'XY' ತಾಯಿಯ ಇಪ್ಪತ್ತ ಮೂರು 'XX' ವರ್ಣತಂತುಗಳ ಗುಣಾಂಶ ಹಾಗೂ ವಂಶವಾಹಿನಿಯಾಗಿ ಬರುತ್ತದೆ. ಮಗುವಿಗೆ ತಾಯಿಯ ಗುಣಾಂಶ 'X' ಸಾಮಾನ್ಯವಾಗಿದ್ದು, ತಂದೆಯ 'Y' ಗುಣಾಂಶವು ತಾಯಿಯ 'XX' ಗುಣಾಂಶವನ್ನು ಮೀರಿ ತಂದೆಯಿಂದ 'Y' ಬರುವುದರಿಂದ ಮಗಳಿಗೆ ತಂದೆಯ 'Y' ಬರಲು ಅಸಾಧ್ಯವಾಗಿದ್ದು, ತಂದೆಯಿಂದ ಗೋತ್ರವು ಮಗನಿಗೆ, ಮೊಮ್ಮಗನಿಗೆ, ಮರಿಮಗನಿಗೆ ಮಾತ್ರ ಮುಂದುವರಿಯುವುದು.
ಮೇಲೆ ಹೆಸರಿಸಿದ ಎಂಟು ಋಷಿಗಳಲ್ಲಿ ಎಂಟು ವಿಭಿನ್ನ 'Y' ಗುಣಾಂಶದ ವರ್ಣತಂತುಗಳಿದ್ದು, ಆ ತಳಿಮೂಲಾಂಶದ ವಂಶವಾಹಿನಿ ನಾವಾಗಿದ್ದೇವೆ ಹಾಗೂ ನಾವು ಯಾವ ಮೂಲ ಪುರುಷನ ಸಂತತಿ ಎಂಬುದು ತಿಳಿಯುತ್ತದೆ. ವಿವಾಹ ವಿಚಾರದಲ್ಲಿ ನಾವು ಸ್ವಗೋತ್ರರಲ್ಲಿ ನೆಂಟಸ್ತಿಕೆ ಮಾಡಿದಲ್ಲಿ Y' ಗುಣಾಂಶದ ವರ್ಣತಂತುಗಳು ಭವಿಷ್ಯದಲ್ಲಿ ಮುಂದುವರೆಯಲಾಗದೆ ನಿಃಶಕ್ತ, ನಿತ್ರಾಣ, ಬೆಳವಣಿಗೆ ಕುಂಠಿತ, ರಕ್ತ ಸಂಬಂಧಿ ಕಾಯಿಲೆ, ಪುತ್ರವಿಹೀನ, ಸಂತಾನ ಹೀನ- ಇತ್ಯಾದಿ ಹಲವಾರು ಸಮಸ್ಯೆಗಳು ಕಾಣಿಸುತ್ತದೆ. ಹಾಗಾಗಿ ಗೋತ್ರವು 'Y' ಗುಣಾಂಶದ ವರ್ಣತಂತುಗಳ ರಕ್ಷಕನಾಗಿದೆ. ಇಂತಹಾ ಉದಾತ್ತ ಋಷಿ ಪರಂಪರೆಯಲ್ಲಿ ಹುಟ್ಟಿದ ಹಾಗೂ ಪ್ರಪಂಚದ ಇತರೆ ನಾಗರಿಕತೆಯು ಕಣ್ಬಿಡುವ ಮುನ್ನ ವೈಜ್ಞಾನಿಕ ಕ್ರಾಂತಿಯನ್ನೇ ಮಾಡಿದ ನನ್ನ ಭಾರತಾಂಬೆಯ ಮಡಿಲಿಗೆ ಕೋಟಿ ಕೋಟಿ ನಮನಗಳು.
ॐಶ್ರೀ
Tuesday, October 6, 2015
Gud morning
ಶುಭಬೆಳಗು, ಗೆಳೆಯರೇ, ಇಂದಿನ ವಿಜಯವಾಣಿ ದಿನಪತ್ರಿಕೆಯ ಶುಭನುಡಿ "ಸಂಬಂಧಗಳು ವಿದ್ಯುತ್ ಸಂಪರ್ಕದಂತೆ, ಹೆಚ್ಚು ಕಡಿಮೆ ಆದರೆ ಅಪಘಾತ, ಸರಿಯಿದ್ದರೆ ಬೆಳಕು. ಸದಾ ಸಂಪರ್ಕ ಸರಿಯಿರಲಿ." ಸೂಪರ್ ಅಲ್ವಾ, ಸಂಬಂಧಗಳು ಸೂಕ್ಷ್ಮ ಅವುಗಳ ನಿರ್ವಹಣೆ ಇನ್ನೂ ಸೂಕ್ಷ್ಮವಾಗಿರಲೇಬೇಕು. ಜೋರಾಗಿ ಎಳೆದರೆ ಅರಿಯುತ್ತದೆ ಪೂರ್ತಿ ಬಿಟ್ಟುಬಿಟ್ಟರೆ ದಾರಿ ತಪ್ಪುತ್ತದೆ. ಸಂಬಂಧ ಎನ್ನುವುದು ಕೇವಲ ಗಂಡ ಹೆಂಡತಿಯ ನಡುವಿರುವುದು ಎಂದು ಮಾತ್ರ ತಿಳಿಯುವಂತಿಲ್ಲ. ಮಕ್ಕಳು-ತಂದೆ,ತಾಯಿ, ಮಕ್ಕಳು - ಮನೆಯಲ್ಲಿರುವ ಹಿರಿಯರು. ವಿದ್ಯಾರ್ಥಿ-ಶಿಕ್ಷಕ/ಕಿ, ಗೆಳೆಯರು,ಗೆಳತಿಯರು,ಪ್ರೇಮಿಗಳು, ಅಧಿಕಾರಿಗಳು ಹೀಗೆ ಹೇಳುತ್ತಾ ಹೋದರೆ ಬಹಳಷ್ಟು ಬಹಳಷ್ಟು ಇವೆ. ಸರಿ ಯಾವುದೇ ಸಂಬಂಧವಾದರೂ ಒಂದು ಸಮತೋಲನದ ಮೇಲೆ ನಿಂತಿರುತ್ತದೆ. ಸಮತೋಲನ ತಪ್ಪಿತೋ ಸಂಬಂಧ ಕೆಟ್ಟಿತೆಂದೇ ಅರ್ಥ. ಒಡೆದು ಹೋದ ಕನ್ನಡಿಯನ್ನು ಬೇಕಾದರೆ ಒಂದು ಮಾಡಬಹುದು(ಕತ್ತರಿಸಿ ಹೋದ ರುಂಡವನ್ನೇ ಮತ್ತೆ ಜೋಡಿಸಿ ಜೀವ ಕೊಟ್ಟ ಉದಾಹರಣೆ ಇಂದಿನ ಪತ್ರಿಕೆಯಲ್ಲಿದೆ , ನಮ್ಮ ವಿಜ್ಞಾನ ಜಗತ್ತಿಗೆ ಒಡೆದ ಕನ್ನಡಿ ಜೋಡಿಸುವುದೇನು ಕಷ್ಟವಲ್ಲ ಬಿಡಿ) ಆದರೆ ಒಡೆದ ಸಂಬಂಧ ಜೋಡಿಸಲಾಗದು. ಒಂದು ವೇಳೆ ಕೂಡಿಸಿದರು ಅದು ಮೊದಲಿನಂತಿರದು. ಸಂಬಂಧ ಕೆಡಲು, ಹಾಳಾಗಲು ಹಲವು ಕಾರಣಗಳಿರಬಹುದು. ನಾನೇ ಗ್ರೇಟ್ ಅನ್ನೋ ಈಗೋ ಬಂದರೆ, ನಾ ಹೇಳಿದ್ದನ್ನೇ ಕೇಳಬೇಕು ಎಂಬ ಸೂಪರ್ ಈಗೋ ನಮ್ಮಲ್ಲಿ ಹರಿದಾಡಿದರೆ, ಮಾತು ಎಲ್ಲೆ ಮೀರಿ ಹರಿದಾಡಿದರೆ, ಒಬ್ಬರು ಇನ್ನೊಬ್ಬರನ್ನು ತಮ್ಮ ಹಿಂಬಾಲಕರಂತೆ ಕಂಡರೆ, ಜೊತೆಯಲ್ಲಿದ್ದುಕೊಂಡೆ ಭಾವನೆಗಳ ಹಂಚಿಕೆಯಾಗದಿದ್ದರೆ, ನಂಬಿಕೆಗಳು ಅರ್ಥಕಳೆದುಕೊಂಡರೆ ಹೀಗೆ ಇನ್ನೂ ಏನೇನೋ ಆಗಿ ಸಂಬಂಧ ಹದಗೆಟ್ಟಾಗ ಅದರ ರಿಪೇರಿ ಮಾಡುವ ಕೆಲಸವಿದೆಯಲ್ಲ ಅದು ಯಾವ ಮೆಕ್ಯಾನಿಕ್ ನಿಗೂ ಸಾಧ್ಯವಾಗದ ಮಾತು. ಅದಕ್ಕೆ ಹಳಸುವ ಮೊದಲೇ ಸಂಬಂಧವನ್ನು ಉಣ್ಣಬೇಕಾದ ಅಗತ್ಯತೆ ಇದೆ. ಕಡಿದುಹೋಗುವ ಮೊದಲೇ ಸಂಬಂಧ ಉಳಿಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ. ಸತ್ತು ಹೋಗುವ ಮೊದಲೇ ನನ್ನ ಪ್ರೀತಿಯ ತೋಡಿಕೊಳ್ಳಬೇಕಿದೆ, ಸಂಬಂಧ ಮುದುಡುವ ಮೊದಲೇ ನನ್ನ ಈಗೋ/ಸೂಪರ್ ಇಗೋ ಹೊರಹೋಗಬೇಕಿದೆ. ಸಂಬಂಧ ಶಾಶ್ವತ ಅದಕ್ಕೆ ಬುನಾದಿ ಅವಶ್ಯಕ. ಶುಭೋದಯ.
Thursday, October 1, 2015
ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು ಅವರನ್ನೇ ಮೀರಿಸಿದ್ದರು. ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ ಹೊಟ್ಟೆಯಲ್ಲೇ ಕಿಚ್ಚು ಹೊತ್ತಿಕೊಂಡಿತ್ತು.
ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ!
ಹಾಗಂತ 1965, ಆಗಸ್ಟ್ 15ರಂದು ಕೆಂಪುಕೋಟೆಯ ಮೇಲೆ ನಿಂತು ಪ್ರಧಾನಿ ಲಾಲ್ಬಹಾದ್ದೂರ್ ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು. ಜತೆಗೆ ದುರ್ಬಲ ಕಾಯದ ಈ ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.
ಇದಾಗಿ ಎರಡು ವಾರಗಳಾಗಿವೆಯಷ್ಟೆ.
ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ ಶಾಸ್ತ್ರಿಯವರು '10 ಜನಪಥ್' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.
ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್ ಮತ್ತು ಏರ್ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು. ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.
ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ ಕೈಗೊಂಡಿದ್ದರು.
ಪಾಕ್ನ ಮೇಲೆ ಯುದ್ಧ ಘೋಷಣೆಯಾಗಿತ್ತು.
ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್ಗಳ ಮೂಲಕ ಭಾರತದ ಮೇಲೆ ಮುಗಿಬಿದ್ದಿದ್ದವು.
ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.
ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ ಬಿಟ್ಟರು!
ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ ಸಂಘರ್ಷ ಅದಾಗಿತ್ತು. ಏಕೆಂದರೆ ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು. ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್ ಟ್ಯಾಂಕ್ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.
ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್ ಉತ್ತರ್' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್ನ 97 ಟ್ಯಾಂಕ್ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್ಖಾನ್ ಬೆದರಿದ. ಏಕೆಂದರೆ ಚೀನಾ ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ ಅಯೂಬ್ಖಾನ್ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.
ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು ಪ್ರಧಾನಿಯಾಗಿದ್ದದ್ದು ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ ಓಗೊಟ್ಟಿದ್ದರು.
ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು. ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್ 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು. ಅವುಗಳಲ್ಲಿ 152 ಟ್ಯಾಂಕ್ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು ವಶಪಡಿಸಿಕೊಂಡಿದ್ದರು.
ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು ಕೇವಲ 128 ಟ್ಯಾಂಕುಗಳು.
ಇತ್ತ ಶಾಸ್ತ್ರಿಯವರ ಬಗ್ಗೆ ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ ಎತ್ತಲಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ, 1962ರಲ್ಲಿ ಚೀನಾ ಆಕ್ರಮಣ ಮಾಡಿದಾಗ ನೆಹರು ಬದಲು ಶಾಸ್ತ್ರೀಜಿ ಪ್ರಧಾನಿಯಾಗಿರಬೇಕಿತ್ತು ಎಂಬ ಭಾವನೆ ಜನಮನದಲ್ಲುಂಟಾಯಿತು.
ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು. ರಣರಂಗದಲ್ಲಿ ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ ಕಜಕಿಸ್ತಾನದ ತಾಷ್ಕೆಂಟ್ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.
ಮುಂದಿನದ್ದು ಮಹಾನ್ ದುರಂತ!
ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.
ಅಯೂಬ್ಖಾನ್ ಒಪ್ಪದೇ ಹೋದಾಗ,''Then you will have to find another PM'' (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.
ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು. ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು. ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು ಅವರನ್ನೇ ಮೀರಿಸಿದ್ದರು.
ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ ಹೊಟ್ಟೆಯಲ್ಲೇ ಕಿಚ್ಚು ಹೊತ್ತಿಕೊಂಡಿತ್ತು. ಹಾಗಾಗಿ ಶಾಸ್ತ್ರಿಯವರ ದುರಂತಮಯ ಅಧ್ಯಾಯ ಸಾವಿನ ನಂತರವೂ ಮುಂದುವರಿಯಿತು.
ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!
ಆದರೆ ಶವ ಪರೀಕ್ಷೆ ನಡೆಯಲಿಲ್ಲ
ಕೆಲವು ಕೃತಘ್ನ ಭಾರತೀಯರೇ ಶಾಸ್ತ್ರಿಯವರನ್ನು ಇತಿಹಾಸದ ಕಸದ ತೊಟ್ಟಿಗೆ ದೂಡಿ ಕೈ ತೊಳೆದುಕೊಳ್ಳಲು ವ್ಯವಸ್ಥಿತ ಪಿತೂರಿ ನಡೆಸಿದ್ದರು. ಗಾಂಧೀಜಿ ಮತ್ತು ನೆಹರು ಅವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಶಾಸ್ತ್ರಿಯವರ ಅಂತ್ಯ ಸಂಸ್ಕಾರ ನಡೆಸಲು ಅಡ್ಡಗಾಲು ಹಾಕಿ, ದೇಹವನ್ನು ಅಲಹಾಬಾದ್ಗೆ ಕೊಂಡೊಯ್ಯಲು ಹವಣಿಸಿದರು.
ಮೊದಲೇ ನೊಂದಿದ್ದ ಪತ್ನಿ ಲಲಿತಾಶಾಸ್ತ್ರಿ ದೇಶದ ಜನರ ಮುಂದೆ ಬಣ್ಣ ಬಯಲು ಮಾಡುವ ಬೆದರಿಕೆ ಹಾಕಿದಾಗ ದಿಲ್ಲಿಯಲ್ಲೇ ಅಂತ್ಯಸಂಸ್ಕಾರ ನಡೆಸಲು ಅವಕಾಶ ಮಾಡಿಕೊಡಲಾಯಿತು. ಅಷ್ಟೇ ಅಲ್ಲ, ಶಾಸ್ತ್ರೀಜಿಯವರ ಸಮಾಧಿ ಮೇಲೆ ಅವರದ್ದೇ ಆದ 'ಜೈ ಜವಾನ್, ಜೈ ಕಿಸಾನ್' ಘೋಷಣೆಯನ್ನು ಕೆತ್ತುವುದಕ್ಕೂ ಅಡ್ಡಿಪಡಿಸಿದರು.
ಮತ್ತೆ ಲಲಿತಾಶಾಸ್ತ್ರಿ ಉಪವಾಸ ಸತ್ಯಾಗ್ರಹ ಮಾಡುವೆನೆಂದು ಬೆದರಿಕೆಯೊಡ್ಡಬೇಕಾಗಿ ಬಂತು. ದುಃಖದಿಂದ ಹೊರಬರುವ ಮೊದಲೇ ಶಾಸ್ತ್ರೀಜಿ ಭಾವಚಿತ್ರ ಕಾಂಗ್ರೆಸ್ ಕಾರ್ಯಾಲಯದಿಂದಲೂ ಕಣ್ಮರೆಯಾಯಿತು. ಇಂದಿರಾಪ್ರೇರಿತ ಕಾಂಗ್ರೆಸ್ಸಿಗರ ಪಿತೂರಿ ಆ ಮಟ್ಟಿಗಿತ್ತು.
1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್ ಸರಾಯ್ನಲ್ಲಿ ಬಡ ಶಿಕ್ಷಕರ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ ತಿಲಕ್ ಅವರಿಂದ ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.
ಆದರೆ ಸ್ವಾತಂತ್ರ್ಯಾನಂತರ ಕೇಂದ್ರ ಸಚಿವರಾದ ಶಾಸ್ತ್ರಿಯವರ ಏಳಿಗೆಯನ್ನು ನೆಹರು ಸಹಿಸದಾದರು. ಅವರ ಅಸಹನೆ ಯಾವ ಮಟ್ಟಕ್ಕೆ ತಲುಪಿತೆಂದರೆ ಎಲ್ಲ ಖಾತೆಗಳನ್ನು ಕಿತ್ತುಕೊಂಡು 'ಖಾತೆ ರಹಿತ' ಮಂತ್ರಿಯಾಗಿಸಿ ಅವಮಾನವನ್ನೂ ಮಾಡಿದರು. ಎಲ್ಲಿ ಶಾಸ್ತ್ರಿಯವರು ಅಡ್ಡಗಾಲಾಗುತ್ತಾರೋ ಎಂಬ ಭಯದಿಂದ 'ನೆಹರು ನಂತರ ಯಾರು?' ಎಂಬ ಪ್ರಶ್ನೆಯನ್ನು ಸ್ವತಃ ಹುಟ್ಟು ಹಾಕಿ ತನ್ನ ಮಗಳು ಇಂದಿರಾ ಗಾಂಧಿಯವರನ್ನು ಉತ್ತರಾಧಿಕಾರಿಯಾಗಿ ಮಾಡಲು ಹವಣಿಸಿದರು. ಶಾಸ್ತ್ರಿಯವರ ನಿಗೂಢ ಮರಣದೊಂದಿಗೆ ನೆಹರು ಆಸೆ ಈಡೇರಿತು.
ಇಂದಿರಾ ಪ್ರಧಾನಿಯಾದರು. ಭಾರತ ಮತ್ತೆ ನೆಹರು ಕುಟುಂಬಕ್ಕೆ ನೇಣು ಹಾಕಿಕೊಂಡಿತು. ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ ಪುತ್ರನನ್ನೇ ಮರೆಯುವಂತಾಯಿತು.
ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?
ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರನ್ನು
ನಾವೂ ಮರೆಯುವುದು ಬೇಡ.
-ಒಂದೇ ಭಾರತ ಶ್ರೇಷ್ಠ ಭಾರತ
#ಜೈ ಹಿಂದ
Plz share every one ....
2..ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.
(ತಪ್ಪದೆ ಈ ಸಂದೇಶ ಶೇರ್ ಮಾಡಿ)
ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.
ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.
ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”
“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ ಪ್ರತಿಕ್ರಿಯೆ..!!
“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾರೆ..
“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು”
ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.
ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.
“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ ನಿಭಾಯಿಸುತ್ತಿದ್ದರು.
ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.
ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” ಎಂದಿದ್ದರು.
ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ ಸರಳ,ಸಜ್ಜನ ಮಹಾಪುರುಷನನ್ನು ನಾವಂದು ಸ್ಮರಿಸಬೇಕಿದೆ.. Forward this guys be proud about shastriji
anilhalebeedu: ಕಲಿಕಾ ಚೇತರಿಕೆ ಉಪಕ್ರಮ ಪಾಠಟಿಪ್ಪಣಿಗಳು 2022-23
anilhalebeedu: ಕಲಿಕಾ ಚೇತರಿಕೆ ಉಪಕ್ರಮ ಪಾಠಟಿಪ್ಪಣಿಗಳು 2022-23 : ತರಗತಿ ಕನ್ನಡ ಇಂಗ್ಲೀಷ್ ಹಿಂದಿ ಗಣಿತ ವಿಜ್ಞಾನ ಸಮಾಜ ವಿಜ್ಞಾನ...
-
ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ. """""""""""""""""...
-
Monday, 9 December 2013 ಮೌರ್ಯರು ಮತ್ತು ಕುಶಾನರು ಮೌರ್ಯ ಸಾಮ್ರಾಜ್ಯಮೌರ್ಯ ಸಾಮ್ರಾಜ್ಯಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ.ಕ್ರಿ.ಪೂ. ೩೨೧ ರಿ೦ದ...
-
ಸಮಾಜ ವಿಜ್ಞಾನ: 8ನೇ ತರಗತಿ ಸಮಾಜ ವಿಜ್ಞಾನ ವಿಷಯದ ಪಿಪಿಟಿಗಳು : ಇತಿಹಾಸ ಆಧಾರಗಳು ಭೌಗೋಳಿಕ ಲಕ್ಷಣಗಳು ಹಾಗೂ ಚರಿತ್ರೆ ಪೂರ್ವ ಭಾರತ ಭಾಗ1 ಮತ್ತು ಭಾಗ2 ಭಾ...
-
ಸ್ಪರ್ಧಾಲೋಕ : ★ ಸಾಮಾನ್ಯ ಜ್ಞಾನ (ಭಾಗ - 10) General Knowledge (Part-10): - 10 ): 1) ಬ್ರಾಡ್ ಗೇಜ್ ಹಳಿಯ ದೂರ ಎಷ್ಟು?— 1676 mm.2) ಒಂದನೇ ಪಾಣಿಪಟ್ ಕ...
-
MEDIEVAL HISTORY (ಮಧ್ಯಯುಗದ ಇತಿಹಾಸ) PagesDEC6 ವಿಜಯನಗರ ಸಾಮ್ರಾಜ್ಯ ವಿಜಯ ನಗರ ಸಾಮ್ರಾಜ್ಯಸಂಗಮ ವಂಶ1. 1 ನೇ ಹರಿಹರ - 1336 – 13562. 1 ನೇ ಬುಕ್ಕ - 1...
-
Thursday, 4 December 2014 ಬಾದಾಮಿ ಚಾಲುಕ್ಯರು ಬಾದಾಮಿ ಚಾಲುಕ್ಯರು ಬಾದಾಮಿ ಚಾಲುಕ್ಯರುಪ್ರಸ್ತುತ ಬಾದಮಿಯು - ಇಂದಿನ ಬಾಗಲಕೋಟ ಜಿಲ್ಲೆಯಲ್ಲಿದೆಚಾಲುಕ್ಯರ ರಾ...
-
ಮರಾಠರು (1649-1748) (99 ವರ್ಷ ಆಳ್ವಿಕೆ) ಹಿನ್ನಲೆ: ಮರಾಠರ ರಾಜಕೀಯ: 1. ಶಾಹಾಜಿ ಭೋಸ್ಲೆ : 2. ಶವಾಜಿ : (1627-1680) ಶಿವಾಜಿ ಜನನ: 1627ತೋರಣ ಕೋಟೆ ವ...
-
ANCIENT HISTORY(ಪ್ರಾಚೀನ ಇತಿಹಾಸ) Home HISTORY CCE ಚಿಂತಕರ ಚಾವಡಿ ಭೂಗೋಳಶಾಸ್ತ್ರ. ▼ Friday, 5 December 2014 ಹೊಯ್ಸಳರು ಹೊಯ್ಸಳರು :- 25. ಹ...
-
Thursday, 4 December 2014 ಬೌದ್ಧ ಧರ್ಮ ಬೌದ್ಧ ಧರ್ಮಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿಬೌದ್ಧ ಧರ್ಮದ ಸ್ಥಾಪಕ - ----- ಗೌತ...
-
BHAMA: ಪ್ರಮುಖ ದಿನಾಚರಣೆಗಳು : ನಮ್ಮ ಶಾಲೆಗಳಲ್ಲಿ ಆಚರಿಸಬಹುದಾದ ಪ್ರಮುಖ ದಿನಾಚರಣೆಗಳು( ರಾಷ್ಟ್ರೀಯ & ಅಂತರಾಷ್ಟ್ರೀಯ) ಕ್ರ . ಸ...